Fri. Oct 10th, 2025

ಕರ್ನಾಟಕ: ಎಸ್‌ಐಆರ್‌ಗೆ ಮುನ್ನುಡಿ

ಸಂದರ್ಭ: ಬಿಹಾರದ ಮಾದರಿಯ ಲ್ಲಿಯೇ ರಾಜ್ಯದಲ್ಲಿಯೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ನಡೆಯಲಿದೆ. ರಾಜ್ಯದ ಎಲ್ಲ ಮತದಾರರು ಎಸ್‌ಐಆರ್‌ಗೆ ಒಳಪಡಲಿದ್ದು, ಮತದಾರರ ಗುರುತಿನ ಚೀಟಿ, ಮತದಾರರ ಪಟ್ಟಿ ಮತ್ತು ಮತಗಟ್ಟೆಗಳು ಬದಲಾಗಲಿವೆ.
  • ರಾಜ್ಯದಲ್ಲಿ ನಡೆಯಲಿರುವ ಎಸ್‌ಐಆರ್‌ ಕುರಿತಂತೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಯು ಪತ್ರಕರ್ತರಿಗೆ ಕಾರ್ಯಾಗಾರ ನಡೆಸಿತು. ಅಲ್ಲಿ, ಎಸ್ಐಆರ್‌ ಪ್ರಕ್ರಿಯೆಯ ವಿವರಗಳನ್ನು ಒದಗಿಸಿದೆ.
  • ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದಲ್ಲಿ ಎಸ್‌ಐಆರ್‌ಗೆ ಸಿದ್ಧತೆ ಮಾಡಿಕೊಳ್ಳಲಾ ಗಿದೆ. ಜಿಲ್ಲಾಧಿಕಾರಿ ಮಟ್ಟದ ಅಧಿಕಾರಿ ಗಳಿಗೆ ತರಬೇತಿ ಪೂರ್ಣಗೊಂಡಿದೆ. ಅಧೀನ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನಡೆಯುತ್ತಿದ್ದು, ಸೆಪ್ಟೆಂಬರ್ 25ರೊಳಗೆ ಪೂರ್ಣಗೊಳ್ಳಲಿದೆ.

ಗರಿಷ್ಠ 90 ದಿನಗಳಲ್ಲಿ ಎಸ್ಐಆರ್ ಪ್ರಕ್ರಿಯೆ: ಅನ್ಬುಕುಮಾರ್

l ಪ್ರತಿ ಮತಗಟ್ಟೆಗೆ ಏಜೆಂಟರನ್ನು ನೇಮಕ ಮಾಡುವಂತೆ ರಾಜಕೀಯ ಪಕ್ಷಗಳಿಗೆ ಸೂಚಿಸಲಾಗಿದೆ

l ಗ್ರಾಮ ಪಂಚಾಯಿತಿ, ನಗರ ಪ್ರದೇಶದ ವಾರ್ಡ್‌ಗಳಲ್ಲಿ ವೈಫೈ ಸವಲತ್ತು ಇರುವ ಶಿಬಿರ ಆರಂಭಿಸಿ ಎಸ್‌ಐಆರ್‌ ನಡೆಸಲಾಗುತ್ತದೆ. ಚುನಾವಣಾ ಆಯೋಗದ ಪೋರ್ಟಲ್‌ಗೆ ಅಪ್‌ಲೋಡ್‌ ಮಾಡಲಾಗುತ್ತದೆ

l ಅಂದಾಜು ಐದು ಕೋಟಿ ಮತದಾರರಿಗಾಗಿ 10 ಕೋಟಿಯಷ್ಟು ಎನ್ಯುಮರೇಷನ್‌ ಫಾರ್ಮ್‌ಗಳನ್ನು ಸಿದ್ಧಪಡಿಸಲಾಗಿದೆ

l ಒಬ್ಬ ಮತದಾರರಿಗೆ ಸೇರಿದ ಹಲವು ಚೀಟಿಗಳು ಇದ್ದರೆ, ಅವುಗಳ ವಿವರ ಶೇ 60ರಷ್ಟು ಹೊಂದಾಣಿಕೆಯಾದರೆ ಅದನ್ನು ತಂತ್ರಾಂಶದ ಮೂಲಕ ಪತ್ತೆ ಮಾಡಲಾಗುತ್ತದೆ

l ಬಿಎಲ್‌ಒಗಳಿಗೆ ಗೌರವಧನವನ್ನು ₹6,000ದಿಂದ ₹12,000ಕ್ಕೆ ಹೆಚ್ಚಿಸಲಾಗಿದೆ. ಎಸ್‌ಐಆರ್‌ನಲ್ಲಿ ಭಾಗಿಯಾಗುವವರಿಗೆ ಹೆಚ್ಚುವರಿಯಾಗಿ ₹6,000 ನೀಡಲಾಗುತ್ತದೆ

l ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಭಾಗಿಯಾಗಿರುವ ಸುಮಾರು 10,000 ನಮೂನೆ 6, ನಮೂನೆ 7 ಮತ್ತು ನಮೂನೆ 8 ಅನ್ನು ಶೀಘ್ರವೇ ವಿಲೇವಾರಿ ಮಾಡುವಂತೆ ನಿರ್ದೇಶನ ನೀಡಲಾಗಿದೆ. ಅವು ವಿಲೇವಾರಿ ಆಗದಿದ್ದರೆ, ಸಂಬಂಧಿತ ಮತದಾರರಿಗೆ ಎನ್ಯುಮರೇಷನ್‌ ಫಾರ್ಮ್‌ ಸೃಜಿಸಲಾಗುವುದಿಲ್ಲ

  • ದೇಶದಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುಂದಾಗಿರುವ ಚುನಾವಣಾ ಆಯೋಗವು, ಪರಿಷ್ಕರಣೆ ವೇಳೆ ರಾಜ್ಯಗಳಲ್ಲಿನ ಅರ್ಧಕ್ಕಿಂತ ಹೆಚ್ಚು ಮತದಾರರು ಯಾವುದೇ ದಾಖಲೆಯನ್ನು ನೀಡಬೇಕಾಗಿಲ್ಲ.
  • ‘ಕೇಂದ್ರ ಚುನಾವಣೆ ಆಯೋಗ ಈ ಬಗ್ಗೆ ಅಧಿಸೂಚನೆ ಹೊರಡಿಸಿದ ತಕ್ಷಣವೇ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಪ್ರಾರಂಭವಾಗಲಿದೆ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್‌ ತಿಳಿಸಿದರು.
  • ‘2002ರಲ್ಲಿ ರಾಜ್ಯದಲ್ಲಿ ಎಸ್ಐಆರ್ ನಡೆದಿತ್ತು. 23 ವರ್ಷಗಳ ನಂತರ ಮತ್ತೆ ಎಸ್ಐಆರ್ಮಾಡಲು ನಿರ್ಧರಿಸಲಾಗಿದೆ. ಈಗಾಗಲೇ 2002 ಮತದಾರರ ಪಟ್ಟಿಯನ್ನು ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿ ಇರುವ ಮತದಾರರು ಪ್ರಸ್ತುತ ಮತದಾರರ ಪಟ್ಟಿಯಲ್ಲಿದ್ದಾರೊ ಇಲ್ಲವೋ ಎಂಬು ದನ್ನು ಖಚಿತಪಡಿಸಿಕೊಳ್ಳಲಾಗುತ್ತದೆ’ ಎಂದು ಅವರು ವಿವರಿಸಿದರು.
  • ಜಿಲ್ಲಾಧಿಕಾರಿಗಳಿಗೆ ಹಾಗೂ ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್) 2002 ಮತದಾರರ ಪಟ್ಟಿ ನೀಡಲಾಗಿದೆ. ಬಿಎಲ್ಒಗಳು ಮನೆಮನೆಗೆ ಭೇಟಿ ಪರಿಶೀಲಿಸುತ್ತಾರೆ. ಎರಡೂ ಪಟ್ಟಿಯಲ್ಲಿ ಹೆಸರು ಇರುವವರಿಗೆ ಕ್ಯೂಆರ್‌ ಕೋಡ್‌ ಆಧಾರಿತ ಗಣತಿ ನಮೂನೆ (ಎನ್ಯುಮರೇಷನ್‌ ಫಾರ್ಮ್‌) ನೀಡಲಾಗುತ್ತದೆ. ಇದರಿಂದ ಅನರ್ಹ ಹಾಗೂ ನಕಲಿ ಮತದಾರರನ್ನು ಪಟ್ಟಿಯಿಂದ ತೆಗೆದು ಹಾಕಲು ಸಹಾಯವಾಗಲಿದೆ’ ಎಂದು ಮಾಹಿತಿ ನೀಡಿದರು.
  • ‘ಪ್ರತಿ ಮತದಾರನಿಗೆ ಸಂಬಂಧಿಸಿದ ಗಣತಿ ನಮೂನೆಯ ಎರಡು ಪ್ರತಿಗಳು ಬಿಎಲ್‌ಒಗಳು ಬಳಿ ಇರುತ್ತವೆ. 2 ಪ್ರತಿಗಳನ್ನು ಭರ್ತಿ ಮಾಡಿದ ನಂತರ ಒಂದಕ್ಕೆ ಬಿಎಲ್‌ಒ ಸಹಿ ಮಾಡಿ ಮತದಾರನಿಗೆ ನೀಡುತ್ತಾರೆ. ಮತ್ತೊಂದು ಆಯೋಗಕ್ಕೆ ಸಲ್ಲಿಸುತ್ತಾರೆ. ಮನೆಯಲ್ಲಿ ಯಾರು ಇಲ್ಲದಿದ್ದರೆ, ಮೂರು ಬಾರಿ ಮನೆಗೆ ಭೇಟಿ ನೀಡಬೇಕು. ಜೊತೆಗೆ ಸ್ನೇಹಿತರ ಮೂಲಕ ಅವರನ್ನು ಸಂಪರ್ಕಿಸಿ, ಎಸ್‌ಐಆರ್‌ ಪ್ರಕ್ರಿಯೆ ನಡೆಸಬೇಕು. ಪತ್ರಿಕೆಗಳ ಮೂಲಕ ಸಹ ಈ ಬಗ್ಗೆ ಪ್ರಚಾರ ಮಾಡಲಿದೆ’ ಎಂದರು.
  • ‘ಎನ್ಯುಮರೇಷನ್‌ ಫಾರ್ಮ್‌ನಲ್ಲಿ ಮತದಾರರ ಗುರುತಿನ ಚೀಟಿಯ ಸಂಖ್ಯೆ, ವಿಳಾಸ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಆಧಾರ್ ಸಂಖ್ಯೆ ಸೇರಿಸಲು ಅವಕಾಶವಿದೆ. ಆಯೋಗ ಸೂಚಿಸಿದ ಯಾವುದಾದರೂ ಒಂದು ದಾಖಲೆ ಸಲ್ಲಿಕೆ ಕಡ್ಡಾಯ ’ ಎಂದರು
  • ಬಹುತೇಕ ರಾಜ್ಯಗಳಲ್ಲಿ 2002 ಮತ್ತು 2004 ನಡುವೆ ಎಸ್ಐಆರ್ನಡೆಸಲಾಗಿದೆ. ಮುಂದಿನ ಎಸ್ಐಆರ್ವೇಳೆ, 2002 ಹಾಗೂ 2004 ನಡುವಿನ ಸಂಬಂಧಿಸಿದ ವರ್ಷವನ್ನೇ ಆಧಾರವನ್ನಾಗಿ ಪರಿಗಣಿಸಲಾಗುವುದು ಎಂದೂ ಆಯೋಗ ಸ್ಪಷ್ಟಪಡಿಸಿದೆ.
  • ಈ ಹಿಂದಿನ ಎಸ್‌ಐಆರ್‌ ಬಳಿಕ ಪ್ರಕಟಿಸಲಾಗಿರುವ ಮತದಾರರ ಪಟ್ಟಿಯನ್ನು ಸಿದ್ಧವಾಗಿಟ್ಟುಕೊಳ್ಳುವಂತೆ ಎಲ್ಲ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ (ಸಿಇಒ) ಈಗಾಗಲೇ ಸೂಚನೆ ನೀಡಲಾಗಿದೆ. ಕೆಲ ರಾಜ್ಯಗಳ ಸಿಇಒಗಳು ಇಂತಹ ಮತದಾರರ ಪಟ್ಟಿಯನ್ನು ಈಗಾಗಲೇ ಕಚೇರಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದಾರೆ.

ಬದಲಾಗಲಿದೆ ಮತಗಟ್ಟೆ, ವಿಭಾಗ

  • ಎಸ್‌ಐಆರ್‌ ಪ್ರಕ್ರಿಯೆಯ ಭಾಗವಾಗಿ ಮತಗಟ್ಟೆ, ವಿಭಾಗಗಳು ಬದಲಾಗಲಿವೆ. ಒಂದು ಕಟ್ಟಡ, ಒಂದು ಬೀದಿ, ಒಂದು ಮತಗಟ್ಟೆ ವಿಭಾಗದಲ್ಲಿ ವಾಸಿಸುತ್ತಿರುವ ಎಲ್ಲ ಮತದಾರರು ಒಂದೇ ಮತಗಟ್ಟೆ ಮತ್ತು ವಿಭಾಗಕ್ಕೆ ಒಳಪಡುವಂತೆ ಮತದಾರರ ಪಟ್ಟಿಯನ್ನು ಪರಿಷ್ಕರಿಸಲಾಗುತ್ತದೆ.
  • ಒಂದು ಮತಗಟ್ಟೆಯಲ್ಲಿ 1,200ಕ್ಕಿಂತಲೂ ಹೆಚ್ಚು ಮತದಾರರು ಇರಬಾರದು. ಪ್ರತಿ ಮತಗಟ್ಟೆಗೆ 1,200 ಮತದಾರರನ್ನು ಮಿತಿಗೊಳಿಸಿ, ಹೊಸಮತಗಟ್ಟೆಗಳನ್ನು ರಚಿಸಲಾಗುತ್ತದೆ.

ತಿರಸ್ಕಾರಕ್ಕೂ ಅವಕಾಶ

  • ಆಯೋಗವು ಸೂಚಿಸಿರುವ ಎಲ್ಲ ದಾಖಲೆಗಳನ್ನು ಸಲ್ಲಿಸಿದ್ದರೂ ಅವರ ಗಣತಿ ನಮೂನೆ (ಎನ್ಯುಮರೇಷನ್‌ ಫಾರ್ಮ್‌) ತಿರಸ್ಕರಿಸಿ ಶಿಫಾರಸು ಮಾಡಲು ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‌ಒ) ಅವಕಾಶವಿದೆ. ಗಣತಿ ನಮೂನೆ, ಘೋಷಣಾ ಪತ್ರದಲ್ಲಿ ಅವುಗಳನ್ನು ಶಿಫಾರಸು ಮಾಡಲಾಗಿದೆ ಅಥವಾ ಶಿಫಾರಸು ಮಾಡಲಾಗಿಲ್ಲ ಎಂದು ಬಿಎಲ್‌ಒ ಆಯ್ಕೆ ಮಾಡಬಹುದಾಗಿದೆ.
  • ಆದರೆ ಬಿಎಲ್‌ಒಗಳು ಶಿಫಾರಸಿಗೆ ಅಗತ್ಯ ಕಾರಣಗಳನ್ನು ಒದಗಿಸಬೇಕು ಮತ್ತು ಇತರ ಕೆಲ ಮತದಾರರ ಸಹಿ ಪಡೆದು ಮಹಜರು ನಡೆಸಿರಬೇಕು. ಬಿಎಲ್‌ಒಯಿಂದ ಶಿಫಾರಸು ಆಗಿ ಬಂದ ಗಣತಿ ನಮೂನೆ ಮತ್ತು ಘೋಷಣಾ ಪತ್ರವನ್ನು ಅಂಗೀಕರಿಸಲಾಗಿದೆ ಅಥವಾ ತಿರಸ್ಕರಿಸಲಾಗಿದೆ ಎಂದು ಆಯ್ಕೆ ಮಾಡುವ ಅಧಿಕಾರ ಮತದಾರರ ನೋಂದಣಾಧಿಕಾರಿಗೆ ನೀಡಲಾಗಿದೆ.

‘ಬಿಪಿಎಲ್‌ ಅನರ್ಹಗೊಂಡರೆ ಎಪಿಎಲ್’

ಸಂದರ್ಭ: ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ಎಪಿಎಲ್‌ ಕಾರ್ಡ್‌ಗಳಾಗಿ ಬದಲಿಸಲಾಗುವುದು. ಹೊಸ ಬಿಪಿಎಲ್‌ ಕಾರ್ಡ್‌ಗಳಿಗೆ  ಮುಂದಿನ ತಿಂಗಳು ಅರ್ಜಿ ಆಹ್ವಾನಿಸಲು ಆಹಾರ ಇಲಾಖೆ ನಿರ್ಧರಿಸಿದೆ. ಈಗ ರದ್ದುಪಡಿಸಿದಷ್ಟು ಕಾರ್ಡ್‌ಗಳನ್ನು ವಿತರಿಸಲು ಮಾತ್ರ ಹೊಸದಾಗಿ ಅವಕಾಶ ಇದೆ.

  • ‘ಸರ್ಕಾರದ ಮಾನದಂಡಗಳ ಅನ್ವಯ ಬಿಪಿಎಲ್‌ ಕಾರ್ಡ್‌ಗಳನ್ನು ಪರಿಷ್ಕರಿಸಲಾಗುವುದು. ಅನರ್ಹವೆಂದು ಕಂಡುಬಂದರೆ ಎಪಿಎಲ್‌ಗೆ ವರ್ಗಾವಣೆ ಮಾಡುತ್ತೇವೆ. ಯಾವ ಪಡಿತರ ಚೀಟಿಯನ್ನೂ ರದ್ದು ಮಾಡುವುದಿಲ್ಲ.
  • ‘ಎಲ್ಲ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯ ಒಳಗೆ ಸರಿಪಡಿಸಿ ಆಹಾರಧಾನ್ಯ ಹಂಚಿಕೆ ಮಾಡಲಾಗುವುದು’.
  • ‘ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕ ದಲ್ಲಿ ಬಿಪಿಎಲ್ ಕಾರ್ಡ್‌ಗಳು ಅತಿ ಹೆಚ್ಚು ಇವೆ. ಶೇಕಡ 75ರಷ್ಟು ಬಿಪಿಎಲ್‌ ಕಾರ್ಡ್‌ಗಳು ಕರ್ನಾಟಕ ದಲ್ಲಿವೆ. ಹೀಗಾಗಿ, ಬಿಪಿಎಲ್‌ ಕಾರ್ಡ್‌ಗಳ ಪರಿಷ್ಕರಣೆ ಅನಿವಾರ್ಯವಾಗಿದೆ.
  • ನಂದಗುಡಿರಾಗಿಗುಡ್ಡ’: ಲಕ್ಷ ವರ್ಷಗಳ ನಂಟು

ಸಂದರ್ಭ: ಇಂದು ಬಿರು ಬಿಸಿಲು, ಒಣ ಭೂಮಿ, ನೀರಿನ ಕೊರತೆಯಿಂದ ಬೆಂಡಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೆಲವು ಪ್ರದೇಶ ಮತ್ತು ಕೋಲಾರ ಜಿಲ್ಲೆಯ ಭೂಭಾಗ ಒಂದಾನೊಂದು ಕಾಲದಲ್ಲಿ ಈಗಿನ ಮಲೆನಾಡಿನಂತೆ ಹೆಚ್ಚು ಮಳೆ ಬೀಳುವ ತೇವದಿಂದ ಕೂಡಿದ ಹಸಿರಿನಿಂದ ನಳನಳಿಸುವ ಪ್ರದೇಶವಾಗಿತ್ತು ಎಂದರೆ ನಂಬುತ್ತೀರಾ?

  • ಅದರಲ್ಲೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ನಂದಗುಡಿಯ ‘ರಾಗಿಗುಡ್ಡ’ ಪ್ರದೇಶ ಕರ್ನಾಟಕ ಮಾತ್ರವಲ್ಲ, ಭಾರತದಲ್ಲೇ ಭೂವಿಸ್ಮಯದ ತಾಣವಾಗಿದೆ. ಭೂಮೇಲ್ಮೈನಿಂದ ಸುಮಾರು 150 ಅಡಿ ಎತ್ತರ ಮತ್ತು ಸಾವಿರಕ್ಕೂ ಹೆಚ್ಚು ಅಡಿ ಸುತ್ತಳತೆಯ ಈ ಗುಡ್ಡ ಸುತ್ತಲಿನ ಸಮತಟ್ಟಾದ ಮೇಲ್ಮೈನಿಂದ ಎದ್ದು ಕಾಣುತ್ತದೆ.
  • ಈ ಗುಡ್ಡದ ಮಹತ್ವ ಏನೆಂದರೆ ಲಕ್ಷಾಂತರ ವರ್ಷಗಳ ಹಿಂದೆ ಸಂಭವಿಸಿದ ವಿಶಿಷ್ಟ ಶೀತಲೀಕರಣ ಪ್ರಕ್ರಿಯೆ ಕುರುಹಾಗಿ ಇದು ಮೈದಳೆದಿದೆ. ಗುಡ್ಡದ ಒಡಲಿನಲ್ಲಿ ಜಂಬಿಟ್ಟಿಗೆ ಇದೆ. ಜಂಬಿಟ್ಟಿಗೆ (ಲ್ಯಾಟರೈಟ್‌) ಎಂಬ ನೈಸರ್ಗಿಕ ಶಿಲೆಯ ನಿರ್ಮಾಣದ ಸುದೀರ್ಘ ಪ್ರಕ್ರಿಯೆಯೇ ಒಂದು ಕುತೂಹಲಕರ ಕಥನ.
  • ಲಕ್ಷಾಂತರ ವರ್ಷಗಳ ಹಿಂದೆ ಈ ಪ್ರದೇಶದಲ್ಲಿದ್ದ ವಿಶಿಷ್ಟ ಹವಾಮಾನ, ಭೂಪ್ರಕ್ರಿಯೆ ಮತ್ತು ಶೀತಲೀಕರಣದ ಪರಿಣಾಮ, ಭೂಮಿಯ ವಿವಿಧ ಸ್ತರಗಳಲ್ಲಿ ಕುತೂಹಲಕರ ಖನಿಜಗಳು ಸೃಷ್ಟಿಯಾಗಿವೆ. ಕೋಲಾರ ಜಿಲ್ಲೆಯ ಬಹುಪಾಲು ಪ್ರದೇಶವು ಲ್ಯಾಟರೈಟ್ ಮತ್ತು ಲ್ಯಾಟರೈಟ್‌ನಿಂದಾದ ಮಣ್ಣಿನಿಂದ ಆವೃತವಾಗಿದೆ. ನಂದಗುಡಿಯ ರಾಗಿಗುಡ್ಡ ಲ್ಯಾಟರೈಟ್‌ ಪ್ರಕ್ರಿಯೆಯ ಪ್ರತಿನಿಧಿಯಂತೆ ಗಮನ ಸೆಳೆಯುತ್ತಿದೆ. ಹೀಗಾಗಿ, ಭೂವಿಜ್ಞಾನಿ ಗಳಿಗೆ ಹೆಚ್ಚಿನ ಸಂಶೋಧನೆಯ ಆಯಸ್ಕಾಂತ ಬಿಂದುವಾಗಿ ಸೆಳೆಯುತ್ತಿದೆ ಎನ್ನುತ್ತಾರೆ ಭೂ ವಿಜ್ಞಾನಿಗಳು.
  • ಈ ಸಂಶೋಧನೆಗೆ ವೆಸ್ಕೋ ಕಂಪನಿಯ ಮುಖ್ಯಸ್ಥ ಕೆ.ಎಸ್‌.ಶಿವಕುಮಾರ್‌ ಅವರು ಕರ್ನಾಟಕ ಅಸೋಸಿಯೇಷನ್‌ ಫಾರ್ ಅಡ್ವಾನ್ಸ್‌ಮೆಂಟ್ ಆಫ್‌ ಸೈನ್ಸ್‌ ಸಂಸ್ಥೆಗೆ ಯೋಜನಾ ರೂಪದಲ್ಲಿ ಧನ ಸಹಾಯ ಮಾಡಿದೆ ಎಂದು ವಿಜ್ಞಾನಿಗಳು ವಿವರಿಸಿದ್ದಾರೆ.

ಲ್ಯಾಟರಟೈಸೇಶನ್ಪ್ರಕ್ರಿಯೆ ಏನು?

  • ಲಾಟರಟೈಸೇಶನ್ಎಂದರೆ ಮೂಲ ಗಡಸು ಕಲ್ಲನ್ನು ಭೌತಿಕವಾಗಿ ಹಾಗೂ ರಾಸಾಯನಿಕವಾಗಿ ಪರಿವರ್ತಿಸಿ ಮೆದು ಕಲ್ಲಿನ ರೂಪವನ್ನು ಕೊಡುವ ಕ್ರಿಯೆ ಆಗಿದೆ.
  • ಬೆಂಗಳೂರು ಗ್ರಾಮಾಂತರ ಮತ್ತು ಕೋಲಾರದ ಸುತ್ತಮುತ್ತ ಗೀರುಶಿಲೆ ಮತ್ತು ಗ್ರಾನೈಟ್‌ ಕಲ್ಲುಗಳು ಸರ್ವೇ ಸಾಮಾನ್ಯ. ಈ ಕಲ್ಲುಗಳು ವಿಶಿಷ್ಟ ಹವಾಗುಣ ಪರಿಸ್ಥಿತಿಯಲ್ಲಿ ಲ್ಯಾಟರೈಟ್‌ ಆಗಿ ಮಾರ್ಪಾಡಾಗುತ್ತವೆ.
  • ನಂದಗುಡಿಯ ಸುತ್ತಮುತ್ತ ನೈಸ್‌ ಎಂಬ ಬೂದಿ ಬಣ್ಣದ ಗಡಸು ಶಿಲೆ ಇದ್ದು, ಇದು ಲಕ್ಷಾಂತರ ವರ್ಷಗಳ ಸವಕಳಿ ಮತ್ತು ರಾಸಾಯನಿಕ ಶೀತಲೀಕರಣಕ್ಕೆ ಒಳಪಟ್ಟು ಕಂದು ಬಣ್ಣದ ಮೆದುವಾದ ಶಿಲೆಯಾಗಿ ಮಾರ್ಪಟ್ಟಿದೆ. ಇದಕ್ಕೆ ಉಷ್ಣವಲಯದ (ಟ್ರಾಫಿಕಲ್) ಹವಾಗುಣವಿರಬೇಕು.

70 ದಾಟಿದವರಿಗೂ ‘ಆಯುಷ್ಮಾನ್ ಭಾರತ್‌’

ಸಂದರ್ಭ: 70 ವರ್ಷ ದಾಟಿದ ಹಿರಿಯರಿಗೆ ಕೇಂದ್ರ ಸರ್ಕಾರದ ವಯೋ ವಂದನಾ ಯೋಜನೆಯ ಮಾರ್ಗಸೂಚಿಗಳ ಪ್ರಕಾರ ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ ಯೋಜನೆ ಪ್ರಯೋಜನಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಸ್ತರಿಸಿ ಆದೇಶ ಹೊರಡಿಸಿದೆ.
  • ಎಪ್ಪತ್ತು ವರ್ಷ ಮತ್ತು ಅದಕ್ಕಿಂತ ಹೆಚ್ಚಿನವರಿಗೆ ಚಿಕಿತ್ಸೆಗಾಗಿ ₹5 ಲಕ್ಷ ಟಾಪ್‌ ಅಪ್‌ ಒದಗಿಸಲಾಗುವುದು. ಅರ್ಜಿ ಸಲ್ಲಿಸಲು ಬಯಸುವವರಿಗೆ ನೋಂದಣಿಗಾಗಿ ಆಯುಷ್ಮಾನ್ ಅಪ್ಲಿಕೇಶನ್‌ನಲ್ಲಿ ಮತ್ತು ವೆಬ್‌ ಪೋರ್ಟಲ್‌ನಲ್ಲಿ (beneficiary.nha.in) ಪ್ರತ್ಯೇಕ ಮಾಡ್ಯೂಲ್‌ ರಚಿಸಲಾಗಿದೆ. ನೋಂದಣಿ ಮಾಡಿಕೊಂಡವರಿಗೆ ವಿಶಿಷ್ಟವಾದ ಆಯುಷ್ಮಾನ್ ಕಾರ್ಡ್ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.

‘ಬಿ. ಸರೋಜಾದೇವಿ ಹೆಸರಿನಲ್ಲಿ ‘ಅಭಿನಯ ಸರಸ್ವತಿ’ ಪ್ರಶಸ್ತಿ’

ಸಂದರ್ಭ: ಪಂಚ ಭಾಷಾ ನಟಿ ದಿವಂಗತ ಬಿ. ಸರೋಜಾದೇವಿ ಅವರು ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ, ಅವರ ಹೆಸರಿನಲ್ಲಿ ರಾಜ್ಯ ಸರ್ಕಾರವು ಈ ಸಾಲಿನಿಂದ ಜಾರಿಗೆ ಬರುವಂತೆ ‘ಅಭಿನಯ ಸರಸ್ವತಿ ಬಿ. ಸರೋಜಾ ದೇವಿ’ ಪ್ರಶಸ್ತಿ ಸ್ಥಾಪಿಸಿದೆ.
  • ಈ ಪ್ರಶಸ್ತಿಯು ₹1 ಲಕ್ಷ ಮತ್ತು 100 ಗ್ರಾಂ ಬೆಳ್ಳಿ ಪದಕ ಒಳಗೊಂಡಿರುತ್ತದೆ. ಪ್ರಸ್ತುತ ಜಾರಿಯಲ್ಲಿರುವ ಕನ್ನಡ ಚಲನಚಿತ್ರ ನೀತಿ- 2011ರಲ್ಲಿನ ವಾರ್ಷಿಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪಟ್ಟಿಯ ನಿಯಮದಂತೆ ಈ ಪ್ರಶಸ್ತಿ ಯನ್ನು ಸ್ಥಾಪಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆದೇಶದಲ್ಲಿ ತಿಳಿಸಿದೆ.
  • ಕನ್ನಡ ಚಿತ್ರರಂಗಕ್ಕೆ ಕನಿಷ್ಠ 25 ವರ್ಷಗಳ ಅವಿಸ್ಮರಣೀಯ ಸೇವೆ ಸಲ್ಲಿಸಿರುವ ಮಹಿಳಾ ಸಾಧಕಿಯರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುವುದು ಎಂದೂ ಆದೇಶದಲ್ಲಿ ವಿವರಿಸಲಾಗಿದೆ.
  • ಬಿ. ಸರೋಜಾದೇವಿ ಅವರ ಸಾಧನೆ ಪರಿಗಣಿಸಿ ರಾಜ್ಯ ಸರ್ಕಾರವು ಇತ್ತೀಚೆಗೆ ಅವರಿಗೆ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿದೆ.
  • ಹೇಗೆ ನಡೆಯಲಿದೆ ಸಮಗ್ರ ಪರಿಷ್ಕರಣೆ?

ರಾಜ್ಯದ 12 ನದಿಗಳು ಮಲಿನ

ಸಂದರ್ಭ: ಕರ್ನಾಟಕದ ನಗರ ಮತ್ತು ಪಟ್ಟಣ ಪ್ರದೇಶಗಳ ಕೊಳಚೆ ನೀರು ಹಾಗೂ ಆಯಾ ಜಲಾನಯನ ಪ್ರದೇಶಗಳಲ್ಲಿನ ಕೈಗಾರಿಕೆಗಳ ತ್ಯಾಜ್ಯ ಸೇರುತ್ತಿರುವುದರಿಂದ 12 ನದಿಗಳು ಕಲುಷಿತಗೊಂಡಿವೆ.
  • ರಾಜ್ಯದ 17 ನದಿಗಳು ಕಲುಷಿತಗೊಂಡಿವೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು (ಸಿಪಿಸಿಬಿ) 2022ರಲ್ಲಿ ಜಲಶಕ್ತಿ ಸಚಿವಾಲಯಕ್ಕೆ ವರದಿ ಸಲ್ಲಿಸಿತ್ತು.
  • ರಾಜ್ಯದ ನದಿಗಳು ಮಲಿನಗೊಂಡಿರುವ ಕುರಿತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದೆ. ಎನ್‌ಜಿಟಿಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಿತವಾಗಿ ಪ್ರಗತಿ ವರದಿ ಸಲ್ಲಿಸುತ್ತಿದೆ.
  • ಗಂಗಾ ಮಾಲಿನ್ಯದ ರಾಷ್ಟ್ರೀಯ ಮಿಷನ್‌ನ ಕೇಂದ್ರ ಮೇಲ್ವಿಚಾರಣಾ ಸಮಿತಿಗೆ ಪತ್ರ ಬರೆದಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ, ‘ಮಲಿನ ನದಿಗಳ ಪಟ್ಟಿಯಲ್ಲಿದ್ದ ಅಘನಾಶಿನಿ, ದಕ್ಷಿಣ ಪಿನಾಕಿನಿ, ಶರಾವತಿ ಹಾಗೂ ಗಂಗಾವಳಿ ನದಿಗಳಲ್ಲಿ ಕರಗಿದ ಆಮ್ಲಜನಕದ (ಬಿಒಡಿ) ಪ್ರಮಾಣ 3 ಮಿಲಿಗ್ರಾಂ/ಲೀಟರ್‌ ದಾಟಿಲ್ಲ. ಹೀಗಾಗಿ, ಈ ನದಿಗಳನ್ನು ಮಲಿನ ನದಿಗಳ ಪಟ್ಟಿಯಿಂದ ಕೈಬಿಡಬೇಕು’ ಎಂದು ಕೋರಿದ್ದಾರೆ. ಜತೆಗೆ, ಎನ್‌ಜಿಟಿಗೂ ವರದಿ ಸಲ್ಲಿಸಿದ್ದಾರೆ.
  • ನದಿಗಳ ಮಾಲಿನ್ಯ ಕಡಿಮೆ ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸುವಂತೆ ಪ್ರಾದೇಶಿಕ ಕಚೇರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಈ ಕೆಲಸ ಪ್ರಗತಿಯಲ್ಲಿದೆ. ಕ್ರಿಯಾಯೋಜನೆ ಸಿದ್ಧಗೊಂಡ ಬಳಿಕ ಕೇಂದ್ರ ಜಲಶಕ್ತಿ ಸಚಿವಾಲಯಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
  • ಮುಕ್ಕಾಲು ಪಾಲು ಗಾಜಾ ನಗರ ಸುತ್ತುವರಿದ ಇಸ್ರೇಲ್

ಸಂದರ್ಭ: ಗಾಜಾ ನಗರದ ಕರಾವಳಿ ಭಾಗದ ದೊಡ್ಡ ಪ್ರದೇಶವೊಂದನ್ನು ಹೊರತುಪಡಿಸಿ ಉಳಿದ ಬಹುಭಾಗವನ್ನು ಇಸ್ರೇಲ್‌ ಸೇನೆಯು ಸುತ್ತುವರಿದಿದೆ. ಒಂದೆಡೆ, ಸಾವಿರಾರು ಪ್ಯಾಲೆಸ್ಟೇನಿಯನ್ನರು ನಗರವನ್ನು ತೊರೆಯುತ್ತಿದ್ದರೆ ಇನ್ನೊಂದೆಡೆ, ಇಸ್ರೇಲ್‌ ಭೂಸೇನೆಯು ಎರಡನೇ ದಿನವೂ ತನ್ನ ದಾಳಿಯನ್ನು ಮುಂದುವರಿಸಿದೆ.

  • ಇಸ್ರೇಲ್‌ನ ಭೂಸೇನೆಯು ಗಾಜಾ ನಗರದ ಮೇಲೆ ನಡೆಸುತ್ತಿರುವ ತೀವ್ರ ದಾಳಿಗೆ ಕನಿಷ್ಠ 16 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಅರ್ಧದಷ್ಟು ಜನರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ. ಗಾಜಾದ ಆಸ್ಪತ್ರೆ ಯಲ್ಲಿದ್ದ 80 ರೋಗಿಗಳಿಗೆ ಈ ದಾಳಿಯ ಕಾರಣದಿಂದ ಹೊರಹೋಗುವಂತೆ ಹೇಳಲಾಗಿದೆ.
  • ಆಹಾರ, ನೀರು, ಔಷಧ ಸೇರಿದಂತೆ ಗಾಜಾ ಜನರಿಗೆ ಮೂಲಸೌಲಭ್ಯ, ನೆರವು ಒದಗಿ ಸುತ್ತಿರುವ ಅಂತರರಾಷ್ಟ್ರೀಯ ಮಟ್ಟದ ಸುಮಾರು 20 ಸಂಸ್ಥೆಗಳು ದಾಳಿಯನ್ನು ಕಟು ಮಾತುಗಳಲ್ಲಿ ಖಂಡಿಸಿವೆ. ‘ಭೂಸೇನೆಯ ಕಾರ್ಯಾಚರಣೆಯು ನರಮೇಧದ ಯುದ್ಧವನ್ನು ವಿಸ್ತರಿಸಿದಂತೆ’ ಎಂದಿರುವ ಕತಾರ್‌, ಇಸ್ರೇಲ್‌ ಮೇಲೆ ತೀವ್ರ ವಾಗ್ದಾಳಿ ನಡೆಸಿದೆ.
  • ‘ಕಳೆದ ಕೆಲವು ದಿನಗಳಲ್ಲಿ ಗಾಜಾ ನಗರದ ಎತ್ತರದ ಕಟ್ಟಡಗಳನ್ನು ಗುರಿಯಾಗಿಸಿ ಸುಮಾರು 150ಕ್ಕೂ ಹೆಚ್ಚು ದಾಳಿಗಳನ್ನು ನಡೆಸಿದ್ದೇವೆ’ ಎಂದು ಇಸ್ರೇಲ್‌ ಹೇಳಿಕೊಂಡಿದೆ. ಈ ಕಟ್ಟಡಗಳಲ್ಲಿ ಸಾವಿರಾರು ಪ್ಯಾಲೆಸ್ಟೇನಿಯನ್ನರು ಆಶ್ರಯ‍ ಪಡೆದುಕೊಂಡಿದ್ದರು. ‘ಕಣ್ಗಾವಲು ನಡೆಸಲು ಹಮಾಸ್‌ ಬಂಡುಕೋರರು ಇಂಥ ಕಟ್ಟಡಗಳನ್ನು ಬಳಸಿಕೊಳ್ಳುತ್ತಾರೆ’ ಎಂದು ಇಸ್ರೇಲ್‌ ದೂರಿದೆ.
  • ದಕ್ಷಿಣಕ್ಕೆ ತೆರಳಲು ಎಚ್ಚರಿಕೆ: ಉತ್ತರ ಗಾಜಾದಿಂದ ದಕ್ಷಿಣ ಗಾಜಾಗೆ ತೆರಳುವಂತೆ ಇಸ್ರೇಲ್‌ ಸೇನೆ ಈಗಾಗಲೇ ಎಚ್ಚರಿಕೆ ನೀಡಿದೆ. ಇದಕ್ಕಾಗಿ ಇನ್ನೊಂದು ಹೊಸ ಮಾರ್ಗವನ್ನು ತೆರೆದಿದೆ. ‘ಈ ಮಾರ್ಗವು ಬುಧವಾರ ಸಂಜೆಯಿಂದ ಆರಂಭಗೊಂಡು ಎರಡು ದಿನ ತೆರೆದಿರಲಿದೆ’ ಎಂದು ಇಸ್ರೇಲ್‌ ತಿಳಿಸಿದೆ.
  • ದೂರಸಂಪರ್ಕ ಸಂಪೂರ್ಣ ಕಡಿತ: ‘ಉತ್ತರ ಗಾಜಾದ ಮುಖ್ಯ ದೂರಸಂಪರ್ಕ ಮೂಲಸೌರ್ಕಯದ ಮೇಲೆ ಇಸ್ರೇಲ್‌ ಸೇನೆಯು ನಿರಂತರವಾಗಿ ದಾಳಿ ನಡೆಸುತ್ತಿದೆ. ಇದರಿಂದಾಗಿ ಬುಧವಾರ ಬೆಳಿಗ್ಗೆಯಿಂದ ಇಲ್ಲಿನ ದೂರವಾಣಿ ಸಂಪರ್ಕ ಮತ್ತು ಅಂತರ್ಜಾಲ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ’ ಎಂದು ಪ್ಯಾಲೆಸ್ಟೇನ್‌ ದೂರಸಂಪರ್ಕ ಪ್ರಾಧಿಕಾರ ಹೇಳಿದೆ.

ಹುಥಿ ವಾಯು ಪ್ರದೇಶ ಸನ್ನದ್ದ

  • ಇರಾನ್‌ ಬೆಂಬಲಿತ ಹುಥಿ ಬಂಡುಕೋರರು ಸಕ್ರಿಯವಾಗಿರುವ ಬಂದರಿನ ಮೇಲೆ ಇಸ್ರೇಲ್‌ ದಾಳಿ ನಡೆಸಿತ್ತು. ಬಳಿಕ ಬಂಡುಕೋರರು ತಮ್ಮ ವಾಯು ರಕ್ಷಣಾ ವ್ಯವಸ್ಥೆಯನ್ನು ಸನ್ನದ್ದ ಸ್ಥಿತಿಯಲ್ಲಿ ಇರಿಸಿದ್ದಾರೆ.
  • ‘ಹೊಡೇಡ ಬಂದರಿನ ಮೂಲಕ ಇರಾನ್‌ನಿಂದ ಶಸ್ತ್ರಾಸ್ತ್ರಗಳು ಬಂಡುಕೋರರನ್ನು ತಲುಪುತ್ತಿವೆ. ಈ ಶಸ್ತ್ರಾಸ್ತ್ರಗಳನ್ನು ಇಸ್ರೇಲ್‌ ಮತ್ತು ಅದರ ಮಿತ್ರ ರಾಷ್ಟ್ರಗಳ ಮೇಲೆ ದಾಳಿ ನಡೆಸಲು ಬಳಸಿಕೊಳ್ಳಲಾಗುತ್ತದೆ’ ಎಂದು ಇಸ್ರೇಲ್‌ ಹೇಳಿದೆ. ‘ಇಸ್ರೇಲ್‌ನವರಿಗೆ ನಾವು ಚಳ್ಳೆಹಣ್ಣು ತಿನ್ನಿಸುತ್ತಿದ್ದೇವೆ. ನಾವು ಅವರಲ್ಲಿ ಗೊಂದಲ ಮೂಡುವಂತೆ ಮಾಡಿ, ದಾಳಿ ಮಾಡುವ ಮುನ್ನವೇ ನಮ್ಮ ವಾಯುಪ್ರದೇಶ ಬಿಟ್ಟು ಹೋಗುವಂತೆ ಮಾಡುತ್ತಿದ್ದೇವೆ’ ಎಂದು ಹುಥಿ ಬಂಡುಕೋರ ಸಂಘಟನೆ ತಿಳಿಸಿದೆ.
0 0 votes
Article Rating
Subscribe
Notify of
guest

0 Comments
Oldest
Newest Most Voted
Inline Feedbacks
View all comments